BREAKING NEWS

FLASH NEWS : ಇಂದು ಮಧ್ಯಾಹ್ನ 2 ಗಂಟೆಗೆ ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟ, ಕೋವಿಡ್ ಲಾಕ್ ಡೌನ್ ಹಿನ್ನಲೆಯಲ್ಲಿ ಶಾಲಾ ಆರಂಭ ಅನಿರ್ದಿಷ್ಟಾವಸ್ಥೆಗೆ, ಪೈವಳಿಕೆನಗರದಲ್ಲಿ ಪ್ರವೇಶಾತಿ ಆರಂಭ, ಪ್ರಿಪ್ರೈಮರಿಯಿಂದ 9ನೇ ತರಗತಿಯವರೆಗೆ ಪ್ರವೇಶ, **********
ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಸೋಮವಾರ ರಜೆ
ಕಾಸರಗೋಡು, ಜು.19: ಕಳೆದ ಗುರುವಾರದಿಂದ ಬಿಟ್ಟು ಬಿಡದೆ ಸುರಿಯುತ್ತಿದ್ದ ಧಾರಾಕಾರ ಮಳೆಯಿಂದ ಕಾಸರಗೋಡು ಜಿಲ್ಲೆಯಾದ್ಯಂತ ತಗ್ಗು ಪ್ರದೇಶಗಳು ಜಲಾವೃತವಾಗಿದೆ. ಮಳೆಯ ಕಾರಣದಿಂದಾಗಿ ಸೋಮವಾರ ಜುಲೈ 20ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ವೃತ್ತಿಪರ ಕಾಲೇಜುಗಳು ಸೇರಿದಂತೆ ಎಲ್ಲಾ ವಿದ್ಯಾಭ್ಯಾಸ ಸಂಸ್ಥೆಗಳಿಗೆ ಜಿಲ್ಲಾಧಿಕಾರಿ ರಜೆ ಸಾರಿ ಆದೇಶ ಹೊರಡಿಸಿದ್ದಾರೆ. ಹಯರ್ ಸೆಕೆಂಡರಿ ಕೋಂಬಿನೇಶನ್ ಟ್ರಾನ್ಸ್ ಫರ್ ಪ್ರಕ್ರಿಯೆ ನಡೆಯುತ್ತಿರುವುದರಿಂದ ಇದಕ್ಕೆ ಸಂಬಂಧಪಟ್ಟ ಕಛೇರಿಗಳು ತೆರೆದು ಕಾರ್ಯನಿರ್ವಹಿಸುವವು ಎಂದು ಮೂಲಗಳು ತಿಳಿಸಿವೆ. ವಿಶ್ವವಿದ್ಯಾಲಯಗಳ ಪರೀಕ್ಷಾ ದಿನಾಂಕಗಳಲ್ಲಿ ಬದಲಾವಣೆಯಿಲ್ಲ. ಇದೇ ರೀತಿ ಜುಲೈ 23ರವರೆಗೆ ರಾಜ್ಯದಲ್ಲಿ ಮಳೆ ಲಭಿಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ (ಪೈನಗರ್ ವಿಷನ್ )

No comments:

Post a Comment